ಮಂಗಳೂರು, ಏ.09(DaijiworldNews/TA): ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆಯು ಬುಧವಾರ ಮಂಗಳೂರಿನಲ್ಲಿ ನಡೆಯಿತು. ನಗರದ ಅಂಬೇಡ್ಕರ್ ವೃತ್ತ ದಿಂದ ಆರಂಭವಾಗಿ ಮಿನಿ ವಿಧಾನ ಸೌಧದ ಮುಂದೆ ಸಮಾಪ್ತಿಗೊಂಡಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜೇಯೇಂದ್ರ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಪ್ರಮುಖರಾದ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸುನೀಲ್ ಕುಮಾರ್, ಶ್ರೀರಾಮಲು, ಮುನಿಸ್ವಾಮಿ, ರವಿಕುಕಾರ್, ಶಾಸಕ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮಂಜು,ಭಾಗೀರಥಿ, ರಾಜೇಶ್ ನಾಯಕ್, ಸಂಸದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ನಾಯಕರು, ಜಿಲ್ಲಾ ನಾಯಕರು ಭಾಗವಹಿಸಿದ್ದಾರೆ.