ಸುಳ್ಯ,ಏ.29 (DaijiworldNews/AK): ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತಿದ್ದ ಲಾರಿಯೊಂದು ಹೊತ್ತಿ ಉರಿದ ಘಟನೆ ಕೊಯನಾಡು ಸಮೀಪ ಮಂಗಳವಾರ ಮುಂಜಾನೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ ಲಾರಿಗೆ ದಿಡೀರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು, ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.ಕಳೆದ ಎರಡು ತಿಂಗಳ ಮುಂಚೆ ಕೂಡಾ ಕೊಯನಾಡು, ಸಮೀಪ ಲಾರಿಯೊಂದು ಹೊತ್ತಿ ಉರಿದ ಘಟನೆ ಕೂಡಾ ವರದಿಯಾಗಿತ್ತು.