ಉಡುಪಿ, ಮೇ. 18 (DaijiworldNews/AA): ಉಡುಪಿ ಧರ್ಮಪ್ರಾಂತ್ಯದ ಆರೋಗ್ಯ ಆಯೋಗದ ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನು ಭಾನುವಾರ ಕಕ್ಕುಂಜೆಯ ಅನುಗ್ರಹ ಪಾಲಾನಾ ಕೇಂದ್ರದಲ್ಲಿ ಆಚರಿಸಲಾಯಿತು.




ಕಾರ್ಯಕ್ರಮವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೊಬೊ ಉದ್ಘಾಟಿಸಿದರು.
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ಮಾಹೆ ಇದರ ಡೀನ್ ಡಾ. ಜುಡಿತ್ ನೊರೋನ್ಹಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಈ ವರ್ಷದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯ ಧ್ಯೇಯವಾದ ನಮ್ಮ ದಾದಿಯರು ನಮ್ಮ ಭವಿಷ್ಯ ವಿಷಯದ ಕುರಿತು ಮಾತನಾಡಿದ ಅವರು, ದಾದಿಯರನ್ನು ನೋಡಿಕೊಳ್ಳುವುದು ನಮ್ಮ ಆರ್ಥಿಕತೆಯನ್ನು ಬಲಪಡಿಸುತ್ತದೆ. ಇದು ಹೆಚ್ಚು ಸೂಕ್ತ ಅಥವಾ ಆಳವಾದದ್ದಲ್ಲ. ನಾವು ಜೋರಾಗಿ ಮತ್ತು ಸ್ಪಷ್ಟವಾಗಿ ಒಪ್ಪಿಕೊಳ್ಳಬೇಕಾದ ವಾಸ್ತವವನ್ನು ಇದು ಒತ್ತಿಹೇಳುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಉಡುಪಿ, ಕಾರ್ಕಳ, ಕುಂದಾಪುರ, ಕಲ್ಯಾಣಪುರ, ಶಿರ್ವ ಭಾಗದ ದಾದಿಯರನ್ನು ವೈದ್ಯರನ್ನು ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೊಬೊ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಚಾನ್ಸಲರ್ ಫಾದರ್ ಸ್ಟಿಫನ್ ಡಿಸೋಜಾ, ಫಾದರ್ ಚಾರ್ಲ್ಸ್ ಸಲ್ಡಾನಾ, ಆರೋಗ್ಯ ಆಯೋಗದ ನಿರ್ದೇಶಕ ಡಾ. ಎಡ್ವರ್ಡ್ ಲೋಬೊ, ಆರೋಗ್ಯ ಆಯೋಗದ ಕಾರ್ಯದರ್ಶಿ ಪ್ರೆಸಿಲ್ಲಾ ನರೋನಾ ಮುಂತಾದವರು ಉಪಸ್ಥಿತರಿದ್ದರು.