ಮಂಗಳೂರು, ಜೂ. 10 (DaijiworldNews/AA): ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂನ್ 9ರಂದು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.


ಭವಿಷ್ಯದಲ್ಲಿ ಮಕ್ಕಳು ಸಮಾಜದಲ್ಲಿ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು. ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಮುರಳಿ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಮಾತನಾಡಿ, 'ವಿದ್ಯಾಭ್ಯಾಸವನ್ನು ಪಡೆದ ನಂತರ ವಿದ್ಯಾರ್ಥಿಗಳು ಸಮಾಜದಲ್ಲಿ ಹೇಗೆ ವಿಧೇಯರಾಗಿ ನಡೆಯಬೇಕು? ಕಲಿತ ಶಾಲೆಯನ್ನು ಯಾವುದೇ ಹುದ್ದೆಯಲ್ಲಿದ್ದರೂ ಹೆತ್ತ ತಾಯಿಯನ್ನು ಮರೆಯದ ಹಾಗೆ ಮರೆಯಬಾರದು' ಎಂದು ಹಿತ ನುಡಿಗಳನ್ನು ಹೇಳಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಮ್ಯಾಕ್ಸಿಂ ಫೆರ್ನಾಂಡಿಸ್, ಸಂತೋಷ್ ಡಿಸೋಜ, ಎಲಿಯಾಸ್ ಡಿಸೋಜ, ಜೋನ್ ಡಿಸೋಜ ಸಂಸ್ಥೆಯ ಪ್ರಾಂಶುಪಾಲ ಸುಧೀರ್ ರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಸುಧೀರ್ ರಾಜ್ ಕೋಟ್ಯಾನ್ ಸ್ವಾಗತಿಸಿ, ಶಿವಾನಂದ್ ಜೆ.ಟಿ.ಓ. ಕಾರ್ಯಕ್ರಮವನ್ನು ನಿರೂಪಿಸಿದರು.