ಉಡುಪಿ, ಜೂ. 12 (DaijiworldNews/AA): ಸಾರ್ವಜನಿಕ ಹಿತಾಸಕ್ತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಜಿಲ್ಲೆಯ ಎಲ್ಲಾ 50 ದ್ವೀಪಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಯಾವುದೇ ವ್ಯಕ್ತಿಯು ಜಿಲ್ಲೆಯ ಯಾವುದೇ ದ್ವೀಪಗಳಿಗೆ ಪ್ರವೇಶಿಸಲು ಅಥವಾ ಯಾವುದೇ ಚಟುವಟಿಕೆಯನ್ನು ನಡೆಸಲು ಅನುಮತಿ ಇರುವುದಿಲ್ಲ. ಈ ಕ್ರಮವನ್ನು ಜನರ ಸುರಕ್ಷತೆಗಾಗಿ ಮತ್ತು ರಾತ್ರಿ ಸಮಯದಲ್ಲಿ ಯಾವುದೇ ಕಾನೂನುಬಾಹಿರ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ಆದೇಶಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.