ಮಂಗಳೂರು, ಜೂ. 14 (DaijiworldNews/TA) : ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿ ಕೊಂಡಿದ್ದು, ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ಆವರಿಸಿಕೊಂಡ ಘಟನೆ ನಡೆದಿದೆ.



ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿಯಿಂದಾಗಿ ಸೊತ್ತು ಹಾನಿಯಾಗಿದೆ. ಬಳಿಕ ಪಾಂಡೇಶ್ವರ ಅಗ್ನಿಶಾಮಕ ಹಾಗು ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗು ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಹರಸಾಹಸ ಪಡಬೇಕಾಯಿತು. ಮೇಲ್ನೋಟಕ್ಕೆ ಗುಜಿರಿ ಅಂಗಡಿಯಲ್ಲಿ ಶಾರ್ಟ್ ಸಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದು ಎಂಬ ಸಾಧ್ಯತೆ ಇದೆ.