ಮಂಗಳೂರು, ಜ. 18 (DaijiworldNews/AA): ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ 22 ನೇ ಸ್ವಲಾತ್ ವಾರ್ಷಿಕದ ಪ್ರಯುಕ್ತ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಭೇಟಿ ನೀಡಿದರು.



ಈ ವೇಳೆ ಮಾತನಾಡಿದ ಅವರು, ಯುವಪೀಳಿಗೆಗೆ ವಿದ್ಯಾಭ್ಯಾಸದ ಮಹತ್ವ ಮತ್ತು ಶಾಂತಿ ಸೌಹಾರ್ದತೆಯ ಸಂದೇಶ ನೀಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಆಡಳಿತ ಮಂಡಳಿ ಅಧ್ಯಕ್ಷ ಎ ಪಿ ಮುಹಮ್ಮದ್ ಇಕ್ಬಾಲ್ ಅವರು ಸಭಾಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಖತೀಬ್ ಸಫ್ವಾನ್ ಇರ್ಫಾನಿ ಮುಂಡೋಳೆ, ಸದರ್ ಉಸ್ತಾದ್ ಝುಬೈರ್ ಯಮಾನಿ ಜೋಕಟ್ಟೆ, ಮುಅಲ್ಲಿಂ ಜಾಬಿರ್ ಜೌಹರಿ ಕಲ್ಲಡ್ಕ, ಉಪಾಧ್ಯಕ್ಷರಾದ ಅಬ್ದುಲ್ ರಝಾಕ್ ಎ ಆರ್, ಕಾರ್ಯದರ್ಶಿ ಸಾಜುದ್ದೀನ್, ಮಾಜಿ ಅಧ್ಯಕ್ಷರಾದ ಸೈಫುದ್ದೀನ್, ಮಾಜಿ ಉಪಾಧ್ಯಕ್ಷರಾದ ಮನ್ಸೂರ್, ಎಂ ಡಿ ಜಬ್ಬಾರ್, ಮಾಜಿ ಕಾರ್ಯದರ್ಶಿ ಅಬ್ದುಲ್ ಖಾದರ್, ಉದ್ಯಮಿ ಅಬ್ದುಲ್ ಖಾದರ್, ಜೊತೆ ಕಾರ್ಯದರ್ಶಿ ಮುಹಮ್ಮದ್ ಆರೀಫ್, ಕೋಶಾಧಿಕಾರಿ ಇಮ್ರಾನ್ ಅಲಿ ಮತ್ತಿತರರು ಉಪಸ್ಥಿತರಿದ್ದರು.