ಮಂಗಳೂರು, ಜ. 20 (DaijiworldNews/ TA): ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು `ಬಿಯಾಂಡ್ ಬೆಂಗಳೂರು' ಮಿಷನ್ ಅಡಿಯಲ್ಲಿ ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ಗೆ 1.93 ಕೋಟಿರೂ. ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. ಬೆಂಗಳೂರಿನ ಆಚೆಗೆ ಉತ್ಕೃಷ್ಟತಂತ್ರಜ್ಞಾನ ಕೇಂದ್ರಗಳನ್ನು ನಿರ್ಮಿಸುವ ರಾಜ್ಯದ ಗುರಿಯಲ್ಲಿ ಇದು ಪ್ರಮುಖ ಮೈಲಿಗಲ್ಲಾಗಿದೆ.

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ ಅವರು ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ನ ವ್ಯವಸ್ಥಾಪಕ ಪಾಲುದಾರಗುರುದತ್ತ ಶೆಣೈಅವರಿಗೆ ಚೆಕ್ ಹಸ್ತಾಂತರಿಸಿದರು.
ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ಗೆ ಮಂಗಳೂರಿನಲ್ಲಿ ಅತ್ಯಂತ ಪ್ರಭಾವಶಾಲಿ ವರ್ಕ್ಸ್ಪೇಸ್ಗೆ ವೇದಿಕೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕೇವಲ ಮೂಲಸೌಕರ್ಯ ಮಾತ್ರವಲ್ಲದೆ, ಜಾಗತಿಕ ಕಂಪನಿಗಳು, ಜಿಸಿಸಿಗಳು ಮತ್ತು ತಂತ್ರಜ್ಞಾನ ಸಂಸ್ಥೆಗಳು ವಿಶ್ವಾಸದಿಂದ ತಮ್ಮಕಾರ್ಯಾಚರಣೆಯನ್ನು ಆರಂಭಿಸಲು ಮತ್ತು ವಿಸ್ತರಿಸಲು ಪೂರಕವಾದ ಸಂಪೂರ್ಣ ಉದ್ಯಮ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ವರ್ಟೆಕ್ಸ್ ಸಹಾಯ ಮಾಡಿದೆ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ.
`ಬಿಯಾಂಡ್ ಬೆಂಗಳೂರು ಮಿಷನ್' ಅಡಿಯಲ್ಲಿ ಬೆಂಗಳೂರಿನ ಹೊರಗಿನ ವರ್ಕ್ಸ್ಪೇಸ್ ಆಪರೇಟರ್ಗೆ ನೀಡಲಾದ ಮೊದಲ ಮತ್ತು ಅತಿದೊಡ್ಡ ಮೊತ್ತದ ಅನುದಾನಗಳಲ್ಲಿ ಒಂದಾಗಿದೆ. ಕಳೆದ ಕೆಲವು ವರ್ಷಗಳಿಂದ, ವರ್ಟೆಕ್ಸ್ ಮಂಗಳೂರಿನ ಐಟಿ ಮತ್ತು ಜಿಸಿಸಿ ಪರಿಸರ ವ್ಯವಸ್ಥೆಗೆ ಪ್ರಮುಖಆಧಾರ ಸ್ತಂಭವಾಗಿ ಹೊರಹೊಮ್ಮಿದೆ. ಪ್ರಸ್ತುತ ಆರು ನಿರ್ವಹಿಸಲ್ಪಟ್ಟ ಕಾರ್ಯಸ್ಥಳಗಳಲ್ಲಿ 2,250 ಕ್ಕೂ ಹೆಚ್ಚು ವೃತ್ತಿಪರರಿಗೆ ಬೆಂಬಲ ನೀಡುತ್ತಿದೆ. ಜಾಗತಿಕ ಉದ್ಯಮಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಸೇರಿದಂತೆ 40ಕ್ಕೂ ಅಧಿಕ ಕಂಪನಿಗಳಿಗೆ ಆತಿಥ್ಯ ವಹಿಸುತ್ತಿದೆ. ಮಂಗಳೂರನ್ನು ರಾಜಧಾನಿಯ ಹೊರಗೆ ಕರ್ನಾಟಕದ ಪ್ರಮುಖ ತಂತ್ರಜ್ಞಾನ ಕ್ಲಸ್ಟರ್ಗಳಲ್ಲಿ ಪ್ರಮುಖವಾಗಿಸಿದ ಹೆಗ್ಗಳಿಕೆಯನ್ನು ಹೊಂದಿದೆ.
“ಕರ್ನಾಟಕ ಸರ್ಕಾರ ಮತ್ತು ಕೆಡಿಇಎಂ ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ನಾವು ಅಭಾರಿಗಳಾಗಿವೆ. ಬೆಂಗಳೂರಿನ ಹೊರಗೆ ಐಟಿ ಮೂಲಸೌಕರ್ಯವನ್ನು ಬಲಪಡಿಸಲು, ಉದ್ಯಮ ವಿಸ್ತರಣೆಯನ್ನು ಸಕ್ರಿಯಗೊಳಿಸಲು ಮತ್ತುಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸಲು ಮಾಡಲಾಗುತ್ತಿರುವ ಕೆಲಸಕ್ಕೆ ಅನುದಾನ ಪ್ರೇರಣೆಯಾಗಿದೆ. ಕರ್ನಾಟಕದ ಉದಯೋನ್ಮುಖ ನಗರಗಳಲ್ಲಿ ಸುಸ್ಥಿರ ತಂತ್ರಜ್ಞಾನ ಪರಿಸರ ವ್ಯವಸ್ಥೆಗಳನ್ನು ನಿರ್ಮಿಸಲು ವರ್ಟೆಕ್ಸ್ ಬದ್ಧವಾಗಿದೆ.
ವರ್ಟೆಕ್ಸ್ ಪ್ರಸ್ತುತ ತನ್ನ ಮಂಗಳೂರು ಕಾರ್ಯಾಚರಣೆಗಳನ್ನು ವಿಸ್ತರಿಸುತ್ತಿದ್ದು, 6,000 ಕಾರ್ಯಸ್ಥಳಗಳಿಗೆ ವಿಸ್ತರಿಸುವ ಯೋಜನೆಗಳೊಂದಿಗೆ, ಬೆಂಗಳೂರು ಮೀರಿ ಚೌಕಟ್ಟಿನ ಅಡಿಯಲ್ಲಿ ಕಾರ್ಯತಂತ್ರದ ತಂತ್ರಜ್ಞಾನ ಮತ್ತು ಜಿಸಿಸಿ ಗಮ್ಯಸ್ಥಾನವಾಗಿ ನಗರದ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ನ ವ್ಯವಸ್ಥಾಪಕ ಪಾಲುದಾರ ಗುರುದತ್ತ ಶೆಣೈ ಅವರು ಈ ಸಂದರ್ಭದಲ್ಲಿ ನುಡಿದರು.
ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ ಕರ್ನಾಟಕದ ವಿಕೇಂದ್ರೀಕೃತ ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಇದು ಸ್ಟಾರ್ಟ್ಅಪ್ಗಳು, ಸಣ್ಣ ಮತ್ತು ಮಧ್ಯಮಗಾತ್ರದ ಉದ್ದಿಮೆಗಳು ಮತ್ತು ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಸಿದ್ಧ ಮಾದರಿಯ ವರ್ಕ್ಸ್ಪೇಸ್ಗಳನ್ನು ಒದಗಿಸುತ್ತಿದೆ. ಮಂಗಳೂರಿನಲ್ಲಿ ಇದರ ಕಾರ್ಯಾಚರಣೆಯು ಉದ್ಯೋಗ ಸೃಷ್ಟಿ, ಸ್ಥಳೀಯ ಪ್ರತಿಭೆಗಳನ್ನು ಉಳಿಸಿಕೊಳ್ಳುವುದು ಮತ್ತು ಪ್ರಾದೇಶಿಕ ಉದ್ಯಮಗಳ ವಿಸ್ತರಣೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.