ಬ್ರಹ್ಮಾವರ, ಜ. 30 (DaijiworldNews/AA): ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಸಂದೇಶಗಳನ್ನು ಹಂಚಿಕೊಂಡ ಆರೋಪದ ಮೇಲೆ ಬ್ರಹ್ಮಾವರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೋಟೇಶ್ವರದ ಕೆ. ನಾಗರಾಜ್(62) ಮತ್ತು ಬ್ರಹ್ಮಾವರದ ವಾರಂಬಳ್ಳಿಯ ಸಂತೋಷ್ ಕುಮಾರ್ ಶೆಟ್ಟಿ(56)ಯನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಪ್ರಭು ಡಿ.ಟಿ., ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರಾದ ಅಶೋಕ್ ಮಾಳಾಬಗಿ ಮತ್ತು ಸುದರ್ಶನ್ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಆರೋಪಿ ಕೆ. ನಾಗರಾಜ್ ಉದ್ಯಮಿಯಾಗಿದ್ದು, ಆರೋಪಿ ಸಂತೋಷ್ ಕುಮಾರ್ ಶೆಟ್ಟಿ ಖಾಸಗಿ ಸಹಕಾರಿ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ.