ಸುಳ್ಯ, ಜ. 31 (DaijiworldNews/TA): ತಾಲೂಕಿನ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.30 ರಂದು ವೈಭವದಿಂದ ನಡೆಯಿತು.

ರಂಗಪೂಜೆ ,ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ ನಡೆಯಿತು. ನಂತರ ಗುಳಿಗ,ಪಂಜುರ್ಲಿ,ಶಿರಾಡಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಉಮೇಶ್ ರಾವ್ ಕೊಂಡೆಪ್ಪಾಡಿ,ಉತ್ಸವ ಸಮಿತಿ ಅಧ್ಯಕ್ಷ ದಯಾನಂದ ಗೌಡ ಜಾಲು ಮತ್ತು ಸದಸ್ಯರು ಉಪಸ್ಥಿತರಿದ್ದರು.