ಮಂಗಳೂರು, ಫೆ. 01 (DaijiworldNews/AA): ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆ.ಎಂ.ಸಿ), ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು KMC ಅತ್ತಾವರ ಆಂಕೊಲಾಜಿ ಸೆಂಟರ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು ರನ್ನರ್ಸ್ ಕ್ಲಬ್, ಡೆಕಾಥ್ಲಾನ್ ಮತ್ತು ಭಾರತ್ ಮಾಲ್ ಸಹಯೋಗದೊಂದಿದೆ ಆಯೋಜಿಸಲಾಗಿದ್ದ "ಮಂಗಳೂರು ಕ್ಯಾನ್-ವಾಕ್ 2026" ನಡಿಗೆಯು ಇಂದು ಬೆಳಿಗ್ಗೆ 6:00 ಗಂಟೆಗೆ ಯಶಸ್ವಿಯಾಗಿ ನಡೆಯಿತು.



ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಮತ್ತು ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಡಾ. ಟಿ.ಎಂ.ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಿಂದ ಈ ನಡಿಗೆಯು ಆರಂಭವಾಗಿ - ಮಂಗಳೂರು ಲೈಟ್ ಹೌಸ್ ನ KMC ಮೆಡಿಕಲ್ ಕಾಲೇಜಿನವರೆಗೆ ನಡೆಯಿತು.
ಜಿಲ್ಲಾ ಆರೋಗ್ಯ ಅಧಿಕಾರಿ (DHO) ಡಾ. ಎಚ್.ಆರ್. ತಿಮ್ಮಯ್ಯ ಮತ್ತು ಮಾಹೆ ಮಣಿಪಾಲ್ ಮಂಗಳೂರು ಕ್ಯಾಂಪಸ್ನ ಪ್ರೊ ವೈಸ್ ಚಾನ್ಸೆಲರ್ ಡಾ. ದಿಲೀಪ್ ಜಿ. ನಾಯಕ್ ಅವರು ಜಂಟಿಯಾಗಿ ಹಸಿರು ನಿಶಾನೆ ತೋರುವ ಮೂಲಕ ನಡಿಗೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ (DMO) ಡಾ. ಶಿವಪ್ರಕಾಶ್, ಮಾಹೆ ಮಣಿಪಾಲ್ ಮಂಗಳೂರು ಕ್ಯಾಂಪಸ್ ನ ಪ್ರೊ ವೈಸ್ ಚಾನ್ಸೆಲರ್ ಡಾ. ದಿಲೀಪ್ ಜಿ. ನಾಯಕ್, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಂಯೋಜಕರಾದ ಡಾ. ಸ್ವಾತಿ ಆಚಾರ್ಯ, ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಚಕ್ರಪಾಣಿ ಎಂ. ವಿಕಿರಣ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಸ್. ಅತಿಯಮಾನ್, ಡಿ.ಎಸ್.ಎಂ.ಎಚ್ ಕಟೀಲಿನ ವೈದ್ಯಕೀಯ ಅಧೀಕ್ಷಕರು ಡಾ. ಶಿವಾನಂದ ಪ್ರಭು, ಮಂಗಳೂರು ರನ್ನರ್ಸ್ ಕ್ಲಬ್ ನ ಡಾ. ಸಂತೋಷ್ ರೈ, ಪ್ರೊಫೆಸರ್ ಸರ್ಜರಿ ವಿಭಾಗದ ಅಸೋಸಿಯೇಟ್ ಡೀನ್ ಡಾ. ಅಶ್ಫಾಕ್ ಮೊಹಮ್ಮದ್, ರೇಡಿಯೇಶನ್ ಆಂಕಾಲಜಿ ವಿಭಾಗದ ಅಸ್ಸಿಸ್ಟೆಂಟ್ ಪ್ರೊಫೆಸರ್ ಡಾ. ಅಭಿಷೇಕ್ ಕೃಷ್ ಉಪಸ್ಥಿತರಿದ್ದರು.
ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ಆರಂಭಿಕ ರೋಗನಿರ್ಣಯದ ಮಹತ್ವವನ್ನು ಸಾರುವ ಈ ನಡಿಗೆಯಲ್ಲಿ ಸುಮಾರು 1200 ಕ್ಕೂ ಹೆಚ್ಚು ಸಾರ್ವಜನಿಕರು, ವೈದ್ಯಕೀಯ ವೃತ್ತಿಪರರು ಮತ್ತು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.