ಪುತ್ತೂರು, ಫೆ. 07 (DaijiworldNews/TA): ದ.ಕ ಜಿಲ್ಲೆ ಒಳ್ಳೆಯ ಸಂಪದ್ಬರಿತ ಜಿಲ್ಲೆಯಾಗಿದ್ದು, ಈ ಭಾಗ ಇನ್ನಷ್ಟು ಬೆಳೆಯಬೇಕಿದೆ. ಇದರಲ್ಲಿ ನಮಗೆ ಯಾವುದೇ ರೀತಿಯ ಸ್ವಾರ್ಥ ಇಲ್ಲ ಎಂದು ಡಿಸಿಎಂ ಇದೇ ವೇಳೆ ತಿಳಿಸಿದರು. ಅವರು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ಶಿಲಾನ್ಯಾಸ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನು ಶಿಲಾನ್ಯಾಸ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ಎಂಟು ತಿಂಗಳಲ್ಲಿ ಕಾಂಗ್ರೆಸ್ ಭವನ ಪೂರ್ಣಗೊಳ್ಳಲಿದೆ. ಆಗ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಇದನ್ನು ಉದ್ಘಾಟಿಸುತ್ತಾರೆ ಎಂಬ ಹೇಳಿಕೆಯ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಡಿಕೆ ಶಿವಕುಮಾರ್, ಅವರು ಆಸೆ ಪಡುವುದನ್ನು ನಾನು ತಪ್ಪು ಎನ್ನಲು ಎನ್ನಲಾಗುತ್ತದೆಯೇ? ಇದು ಅವರ ಪ್ರಾರ್ಥನೆಯಾಗಿದೆ. ಹಾಗಾಗಿ ಪ್ರಯತ್ನ ವಿಫಲವಾಗಬಹುದು. ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದೀನಿ ಎಂದು ಉತ್ತರಿಸಿದರು. ಸದ್ಯ ಡಿಕೆಶಿ ಅವರ ಮಾತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.