ಉಡುಪಿ, ಫೆ. 18 (DaijiworldNews/TA): ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ,ಶ್ರೀ ಮಹಾ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿತು.

ಶ್ರೀ ಹರಿಹರ ಪುಣ್ಯಕ್ಷೇತ್ರ ಹಾಗೂ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಧೀನ ಒಳಪಟ್ಟ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಂಗಳವಾರದಂದು ವಿದ್ವಾನ್ ಕೆ ಎಸ್ ಕೃಷ್ಣಮೂರ್ತಿ ತಂತ್ರಿ ಕೊರಂಗ್ರಪಾಡಿ ಹಾಗೂ ಪ್ರಧಾನ ಅರ್ಚಕರಾದ ಸುಧೀಂದ್ರ ಉಪಾಧ್ಯ ಹಾಗೂ ಅರ್ಚಕ ವೃಂದದವರ ನೇತೃತ್ವದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ದೇವರಿಗೆ ಕಲಶಾಭಿಷೇಕ ಮಹಾ ರುದ್ರಾಯಾಗ ಮಹಾ ವಿಷ್ಣು ಸಹಸ್ರನಾಮ ಹೋಮ ಸೇರಿದಂತೆ ಅನ್ನಸಂತರ್ಪಣೆ ಕೂಡ ನಡೆಯಿತು.
ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ,ಶ್ರೀ ಮಹಾ ವಿಷ್ಣು ಮೂರ್ತಿ ದೇವಸ್ಥಾನ ಇತಿಹಾಸ ಪ್ರಸಿದ್ಧವಾಗಿದ್ದು ಅನೇಕ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದವನ್ನು ಸ್ವಿಕರಿಸಿದರು. ದೇವಸ್ಥಾನ ಆಡಳಿತ ಮಂಡಳಿ ನೂತನ ಕೆರೆ, ಶ್ರೀ ದೇವರಿಗೆ ನೂತನ ಚಂದ್ರಮಂಡಲ ರಥ, ಸುತ್ತುಪೌಳಿಯ ಒಳಗೆ ನೈರುತ್ಯ ದಿಕ್ಕಿನಲ್ಲಿ ಗಣಪತಿ ಗುಡಿ ನಿರ್ಮಾಣ, ಶ್ರೀ ಕ್ಷೆತ್ರದಲ್ಲಿ ನಡೆಯುವ ಅನ್ನದಾನಕ್ಕೆ ಶಾಶ್ವತ ನಿಧಿ ಮುಂದಿನ ದಿನಗಳಲ್ಲಿ ಯೋಜನೆಯನ್ನು ಹಾಕಿಕೊಂಡಿದ್ದು ಸಾರ್ವಜನಿಕರ ಹಾಗೂ ಭಕ್ತಾಧಿಗಳ ಪ್ರೋತ್ಸಾಹ ಅಗತ್ಯವಾಗಿದೆ.