ಸುಳ್ಯ, ಮಾ. 23 (DaijiworldNews/TA): ಅಲೆಕ್ಕಾಡಿ ಹಾಲು ಸೊಸೈಟಿಯ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ ಘಟನೆ ನಡೆದಿದೆ.

ಮಧ್ಯಾಹ್ನದ ವೇಳೆಗೆ ಬೆಂಕಿ ಹತ್ತಿಕೊಂಡಾಗ ಪರಿಸರದವರ ಗಮನಕ್ಕೆ ಬಂದು ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸುಳ್ಯ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಬಂದಿ ಕಾರ್ಯಾಚರಣೆ ನಡೆಸಿದರು. ಸ್ಥಳೀಯರು ಸಹಕರಿಸಿದರು.