ಬಂಟ್ವಾಳ, ಜು. 17 (DaijiworldNews/AA): ಆರೋಪಿಯೋರ್ವನ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ನಗರ ಠಾಣಾ ಅ.ಕ್ರ 95/2026 U/S 78 126,103 ಬಿ.ಎನ್.ಎಸ್, 2023 ಮತ್ತು ಕಲಂ: 25, 27, ಆರ್ಮ್ಸ್ ಆಕ್ಟ್ ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣ ಕುರಿತು ವಿವಿಧ ವಾಟ್ಸಾಪ್ ಗ್ರೂಪ್ಗಳು ಹಾಗೂ ಇನ್ಸ್ಟಾಗ್ರಾಂ ಖಾತೆಗಳ ಮೂಲಕ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಲಾಗಿರುತ್ತದೆ. ಈ ರೀತಿ ಫೋಟೋ ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿರುವುದಕ್ಕೆ ಸಂಬಂಧಿಸಿದಂತೆ 1) troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj pariWhatsapp group 5)Yuva CongressBelthangady Whatsappgroup 6) Facts and Justice Whatsappgroup ಗಳ ವಿರುದ್ಧ ಅ.ಕ್ರ: 96/2026 ಕಲಂ: 196, 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಫೇಸ್ಬುಕ್ನಲ್ಲಿ ಶೈಲಜ ಅಮರ್ನಾಥ್ ಎಂಬವರ ಖಾತೆಯಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಫೋಸ್ಟ್ ಹಾಕಿರುವ ಬಗ್ಗೆ ಅ.ಕ್ರ: 97/2026 ಕಲಂ: 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಚೇತನ್ ಬೆಲ್ಚಡ ಎಂಬ ಪೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತೆನೆಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣಾ 98/2026 ಕಲಂ: 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಮೇಲಿನ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.