ಬೆಂಗಳೂರು, ಜೂ. 05 (DaijiworldNews/AA): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್ ಬಾಲ್ ಕ್ರೀಡಾಪಟು ಚಿನ್ಮಯಿ ಶೆಟ್ಟಿ(19) ನಿಧನರಾಗಿದ್ದಾರೆ.

ಬೆಂಗಳೂರು ತಿಪ್ಪಸಂದ್ರ ನಿವಾಸಿಗಳಾದ ಹೆಬ್ರಿ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿಯವರ ಪುತ್ರಿ ಕು.ಚಿನ್ಮಯಿ ಶೆಟ್ಟಿ ಮೃತಪಟ್ಟಿದ್ದಾರೆ.
ಚಿನ್ಮಯಿ ಶೆಟ್ಟಿ ಅವರು ಬೆಂಗಳೂರಿನ ಕನಕಪುರ ಮಾರ್ಗದ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. 'ಯಕ್ಷತರಂಗ ಬೆಂಗಳೂರು'ನ ಯಕ್ಷಗಾನ ಕಲಿಯುತ್ತಿದ್ದರು. ಜೊತೆಗೆ ಚಿನ್ಮಯಿ ಶೆಟ್ಟಿ ಅವರು ಪ್ರತಿಭಾ ವಂತ ಬಾಸ್ಕೆಟ್ ಬಾಲ್ ಕ್ರೀಡಾಪಟುವಾಗಿದ್ದರು.
ಬುಧವಾರ ನಡೆದ ಆರ್ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ಅವಘಡದಲ್ಲಿ ಮೃತರಾದ ಕು. ಚಿನ್ಮಯಿಗೆ ಚಿರಶಾಂತಿ ಸಿಗಲಿ. ಅವಳ ತಂದೆ ತಾಯಿ ಹಾಗೂ ಬಂಧು ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಯಕ್ಷತರಂಗ ಬೆಂಗಳೂರು (ರಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.