ಬೆಂಗಳೂರು, ಜೂ. 08 (DaijiworldNews/AA): ಆರ್ಸಿಬಿ ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು ಅಂತ ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿರುವ ಅವರು ಇಡೀ ಸರ್ಕಾರ ವಜಾಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವಿಲ್ಲಿ ನಲವತ್ತು ಜನ ಪ್ರತಿಭಟನೆ ಮಾಡ್ತಿದೀವಿ, ಪೊಲೀಸರು 150 ಜನ ಬಂದಿದ್ದಾರೆ, ಗನ್ಗಳನ್ನೂ ತಂದಿದ್ದಾರೆ. ನಮ್ಮ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಮುಂದಾಗಿದೆ, ನಮ್ಮನ್ನೂ ಬಂಧಿಸಬಹುದು. ಸಿಎಂ, ಡಿಸಿಎಂ ವಿಸ್ಕಿ ಬಾಟಲಿ ಆರ್ಸಿಬಿ ಪ್ರಮೋಷನ್ಗೆ ವಿಧಾನಸೌಧ ಕಾರ್ಯಕ್ರಮ ಮಾಡಿದ್ದಾರೆ. ಆರ್ಸಿಬಿ ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು ಎಂದು ವ್ಯಂಗ್ಯ ಮಾಡಿದ್ದಾರೆ.
ಪೊಲೀಸರ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪೊಲೀಸರ ರಕ್ಷಣೆ ಯಾರು ಮಾಡ್ತಾರೆ? ನಾವು ಪೊಲೀಸರ ಜೊತೆ ನಿಲ್ತೇವೆ. ಈ ಪ್ರಕರಣದಲ್ಲಿ ಪೊಲೀಸರ ಪರ ನಮ್ಮ ಹೋರಾಟ, ದುರಂತದಲ್ಲಿ ಪೊಲೀಸರ ಪಾತ್ರ ಇಲ್ಲ. ವಿಧಾನಸೌಧ ಡಿಸಿಪಿ ಕ್ಲೀನಾಗಿ ಪತ್ರದಲ್ಲಿ ಬರೆದಿದ್ದಾರೆ. ಸಿಬ್ಬಂದಿ ಇಲ್ಲ ಅಂದ್ರೂ ಹೇಗೆ ಕಾರ್ಯಕ್ರಮ ಮಾಡಿದ್ರಿ? ಎಂದು ಪ್ರಶ್ನಿಸಿದರು.
ಒಬ್ಬ ಪೊಲೀಸ್ ಅಧಿಕಾರಿ ಆಗಲ್ಲ ಅಂದ್ಮೇಲೂ ಹೇಗೆ ಕಾರ್ಯಕ್ರಮ ಮಾಡಿದ್ರಿ? ಯಾವ ಕಾನೂನು ಅಡಿ ಕಾರ್ಯಕ್ರಮ ಮಾಡಿದ್ರಿ? ಪೊಲೀಸರು ಸಾವಿನ ಬಗ್ಗೆ ಹೇಳಲಿಲ್ಲ ಅಂತಾರೆ. ನಿಮ್ಮ ಅಧಿಕಾರಿಗಳು ಮಣ್ಣು ತಿಂತಿದ್ರಾ? ಟಿವಿಗಳಲ್ಲಿ ಕ್ಷಣಕ್ಷಣಕ್ಕೂನ್ಯೂಸ್ ಬರ್ತಿತ್ತಲ್ಲ. ಈ ಸರ್ಕಾರ ವಜಾ ಆದ್ರೆ ಮಾತ್ರ ಸತ್ತವರ ಆತ್ಮಕ್ಕೆ ಶಾಂತಿ ಸಿಗುತ್ತೆ ಎಂದು ವಾಗ್ದಾಳಿ ನಡೆಸಿದರು.