ಅಹಮದಾಬಾದ್, ಜೂ. 13 (DaijiworldNews/TA): ಅಹಮದಾಬಾದ್ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ 241 ಪ್ರಯಾಣಿಕರಲ್ಲಿ ಒಬ್ಬರಾದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿಯಾದರು.

ಬಿಜೆಪಿ ನಾಯಕನಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಮಾಜಿ ಮುಖ್ಯಮಂತ್ರಿ ವಿನಮ್ರ ಮತ್ತು ಶ್ರಮಶೀಲ ವ್ಯಕ್ತಿಯಾಗಿದ್ದು, ಪಕ್ಷದ ಸಿದ್ಧಾಂತಕ್ಕೆ ದೃಢವಾಗಿ ಬದ್ಧರಾಗಿದ್ದರು ಎಂದು ಹೇಳಿದರು. ಗುಜರಾತ್ನ ಮಾಜಿ ಮುಖ್ಯಮಂತ್ರಿ ಅವರು ಹಲವು ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ನಿರ್ವಹಿಸಿದ ಕೊಡುಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.
ಗುರುವಾರ ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ -171 ವಿಮಾನದಲ್ಲಿ ವಿಜಯ್ ರೂಪಾನಿ ನಿಧನರಾದರು.ದಿವಂಗತ ವಿಜಯ್ ರೂಪಾನಿ ಅವರ ಪತ್ನಿ ಅಂಜಲಿ ರೂಪಾನಿ ಶುಕ್ರವಾರ ಅಹಮದಾಬಾದ್ಗೆ ಆಗಮಿಸಿದ್ದಾರೆ.