ರಾಜಸ್ಥಾನ, ಜು. 11 (DaijiworldNews/AA): ಯುಪಿಎಸ್ಸಿ ಪರೀಕ್ಷೆ ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯನ್ನು ಕೆಲ ಅಭ್ಯರ್ಥಿಗಳು ಕೇವಲ ಒಂದೇ ಪ್ರಯತ್ನದಲ್ಲಿ ಉತ್ತೀರ್ಣರಾಗುತ್ತಾರೆ. ಆದರೆ ಕೆಲ ಅಭ್ಯರ್ಥಿಗಳು ಎರಡು ಮೂರನೇ ಪ್ರಯತ್ನದಲ್ಲಿ ಉತ್ತೀರ್ಣರಾಗುತ್ತಾರೆ. ಹೀಗೆ ತನ್ನ ಎರಡನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತೀಕ್ ಜೈನ್ ಅವರ ಸ್ಫೂರ್ತಿದಾಯಕ ಕತೆ ಇದು.

ರಾಜಸ್ಥಾನದ ಅಜ್ಮೀರ್ ಮೂಲದ ಪ್ರತೀಕ್ ಅವರು ತಮ್ಮ ಶಾಲಾ ಶಿಕ್ಷಣವನ್ನು ಪೂರೈಸಿದ ನಂತರ ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ (ಬಿಐಟಿಎಸ್) ಪಿಲಾನಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದರು. ಜೈವಿಕ ವಿಜ್ಞಾನವನ್ನು ಅಧ್ಯಯನ ಮಾಡಿದ ಅವರು, 2020 ರಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (ಜೆಎನ್ಯು) ಸಾರ್ವಜನಿಕ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಪ್ರತೀಕ್ ಅವರ ಐಎಎಸ್ ಅಧಿಕಾರಿಯಾಗುವ ಪ್ರಯಾಣ ಸುಲಭವಾಗಿರಲಿಲ್ಲ. ಅವರು ಮೊದಲು 2016 ರಲ್ಲಿ ಯುಪಿಎಸ್ಸಿ ಪರೀಕ್ಷೆಗೆ ಪ್ರಯತ್ನಿಸಿ, ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಎರಡನ್ನೂ ತೆರವುಗೊಳಿಸಿದರೂ ಅಂತಿಮ ಪಟ್ಟಿಗೆ ಸೇರಲಿಲ್ಲ. ಆದಾಗ್ಯೂ, ಅವರು ಅದೇ ವರ್ಷ ಐಎಫ್ಒಎಸ್ ಪರೀಕ್ಷೆಯಲ್ಲಿ ಅಖಿಲ ಭಾರತ 3ನೇ ರ್ಯಾಂಕ್ ಗಳಿಸಿದರು. ಧೃತಿಗೆಡದೆ, ಪ್ರತೀಕ್ ಐಎಎಸ್ ಅಧಿಕಾರಿಯಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು 2017 ರಲ್ಲಿ ಮತ್ತೊಮ್ಮೆ ಯುಪಿಎಸ್ಸಿ ಪರೀಕ್ಷೆಯನ್ನು ಬರೆದರು. ಈ ಬಾರಿ ಅವರು ಅಖಿಲ ಭಾರತ ೮೬ನೇ ರ್ಯಾಂಕ್ ಪಡೆದು ತಮ್ಮ ಕನಸನ್ನು ಯಶಸ್ವಿಯಾಗಿ ನನಸಾಗಿಸಿಕೊಂಡರು.
ತಮ್ಮ ಐಎಎಸ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ, ಪ್ರತೀಕ್ ಅವರು ಮೊದಲಿಗೆ ಹರಿದ್ವಾರದಲ್ಲಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿ (ಸಿಡಿಒ) ನೇಮಕಗೊಂಡರು. ನಂತರ ನೈನಿತಾಲ್ನಲ್ಲಿ ಉಪ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದರು. ಬಳಿಕ ಅವರು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಪ್ರತೀಕ್ ಜೈನ್ ಅವರು ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿ (ಸಿಡಿಒ) ಸೇವೆ ಸಲ್ಲಿಸುತ್ತಿದ್ದಾರೆ.