ಚಿಕ್ಕಮಗಳೂರು, ನ. 04 (DaijiworldNews/HR): ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿ ಮಾಳವಿಕಾ ಅವರಿಗೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನದ ಭೀತಿ ಎದುರಾಗಿದೆ.

ಈ ಪ್ರಕರಣಕ್ಕೆ ಸಂಬಮ್ಧಿಸಿದಂತೆ ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ ಎಂಟು ಜನರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಅನ್ನು ಹೊರಡಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಜೆಎಂಎಫ್ ಸಿ ಕೋರ್ಟ್ ನಿಂದ ಇಂದು ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಲಾಗಿದೆ.
ಇನ್ನು ದಿವಂಗತ ಸಿದ್ಧಾರ್ಥ್ ಒಡೆತನದ ಎಬಿಸಿ ಸಂಸ್ಥೆಗೆ ಕಾಫಿ ಬೆಳೆಯನ್ನು ನೀಡಿದ್ದ ಸುಮಾರು 300ಕ್ಕೂ ಹೆಚ್ಚು ಬೆಳೆಗಾರರಿಗೆ ಸಂಸ್ಥೆಯು ಹಣವನ್ನು ಪಾವತಿಸಲಿಲ್ಲ ಮತ್ತು 100 ಕೋಟಿಗೂ ಹೆಚ್ಚು ಹಣವನ್ನು ಬೆಳಗೆಗಾರರಿಗೆ ನೀಡದೇ ಬಾಕಿ ಉಳಿಸಿಕೊಳ್ಳಲಾಗಿದ್ದರಿಂದ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಳವಿಕಾ ಸಿದ್ಧಾರ್ಥ್ ಸೇರಿ ಎಂಟು ಮಂದಿಗೆ ವಾರೆಂಟ್ ನೀಡಲಾಗಿದೆ.