ಕಾಸರಗೋಡು,ಏ.23DaijiworldNews/AK): ನಗರದ ಆನೆಬಾಗಿಲು ಎಂಬಲ್ಲಿ ಎರಡು ದಿನಗಳ ಹಿಂದೆ ನಡೆದ ವಲಸೆ ಕಾರ್ಮಿಕನ ಕೊಲೆಗೆ ಸಂಬಂಧಪಟ್ಟಂತೆ ಕಾಸರಗೋಡು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪಶ್ಚಿಮ ಬಂಗಾಳದ ಸಂಜಿತ್ ರಾಯ್ ( 25) ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ದ ಸುಶಾಂತ್ ರಾಯ್ ( 30) ರವರ ಕೊಲೆಗೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿದೆ.
ಕಟ್ಟಡ ನಿರ್ಮಾಣ ಕಾಮಗಾರಿಗೆ ಆರು ತಿಂಗಳ ಹಿಂದೆ ಕಾಸರಗೋಡಿಗೆ ಬಂದಿದ್ದ ಆರು ಮಂದಿಯ ತಂಡವು ಆನೆಬಾಗಿಲು ಎಂಬಲ್ಲಿ ಕ್ವಾಟರ್ಸ್ ನಲ್ಲಿ ವಾಸವಾಗಿದ್ದು ,ಸೋಮವಾರ ಮುಂಜಾನೆ ಇವರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಬಲವಾದ ಪೆಟ್ಟು ಬಿದ್ದುದರಿಂದ ಸುಶಾಂತ್ ಅಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದರು.
ತಲೆಯ ಹಿಂಭಾಗಕ್ಕೆ ಬಿದ್ದ ಬಲವಾದ ಪೆಟ್ಟು ಸಾವಿಗೆ ಕಾರಣ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದುಬಂದಿತ್ತು. ಕೃತ್ಯದ ಬಳಿಕ ಸಂಜಯ್ ರಾಯ್ ಸೇರಿ ದಂತೆ ಜೊತೆಗಿದ್ದವರು ಪರಾರಿಯಾಗಲೆತ್ನಿಸಿದ್ದು , ಪಾಲಕ್ಕಾಡ್ ನಿಂದ ಪೊಲೀಸರು ವಶಕ್ಕೆ ಪಡೆದಿದ್ದರು.
ಒಟ್ಟು ೧೪ ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಪ್ರಮುಖ ಆರೋಪಿಯಾದ ಸಂಜಯ್ ರಾಯ್ ನನ್ನು ಬಂಧಿಸಿದ್ದಾರೆ . ಸಂಜಯ್ ರಾಯ್ ಸುಶಾಂತ್ ನ ಸಂಬಂಧಿಕ ಎಂದು ಪೊಲೀಸರು ತಿಳಿಸಿದ್ದಾರೆ. ಪಾನಮತ್ತರಾಗಿ ಇವರ ನಡುವೆ ಘರ್ಷಣೆ ನಡೆದಿದ್ದು ,ಮರದ ತುಂಡಿನಿಂದ ಈತ ಸುಶಾಂತ್ ಗೆ ಹಲ್ಲೆ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ .