ಬೆಂಗಳೂರು,ಅ. 28 (DaijiworldNews/AK): ರಾಜೇಂದ್ರ ಸಿಂಗ್ ಬಾಬು ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಪ್ರಯುಕ್ತ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿದೆ.

5 ದಿನಗಳ ಕಾಲ ಚಾಮರಾಜಪೇಟೆಯ ಕಲಾವಿದರ ಭವನದಲ್ಲಿ ಸಾಧನೆ ಸಂಭ್ರಮ ಚಿತ್ರೋತ್ಸವ ಕಾರ್ಯಕ್ರಮ ನಡೆದಿದೆ. ಅಕ್ಟೋಬರ್ 23 ರಿಂದ 27ರವರೆಗೆ ರಾಜೇಂದ್ರಸಿಂಗ್ ಬಾಬು ಅವರ ಸಿನಿಮಾಗಳ ಪ್ರದರ್ಶನ, ಸಂವಾದ ಸಂಕೀರ್ಣ ಕಾರ್ಯಕ್ರಮಕ್ಕೆ ಅಕೋಬರ್ 27ರಂದು ಎಳೆಯಲಾಗಿದೆ.
ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು, ನಿರ್ದೇಶಕರು, ನಿರ್ಮಾಪಕರು ರಾಜೇಂದ್ರ ಸಿಂಗ್ ಬಾಬು ಅವರ ಆಪ್ತರು ಹಾಗೂ ಕುಟುಂಬಸ್ಥರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ನಟಿ ಸುಹಾಸಿನಿ ರಾಜೇಂದ್ರ ಸಿಂಗ್ ಬಾಬು ಅವರ ಒಟ್ಟಿಗಿನ ಒಡನಾಟ, ಸಿನಿಮಾ ಶೂಟಿಂಗ್ ದಿನಗಳನ್ನ ನೆನೆದಿದ್ದಾರೆ. ಜೊತೆಗೆ ಬಾಬು ಅವರು ಅವಕಾಶ ಕೊಡದೇ ಇದ್ದಿದ್ದರೇ ಸುಹಾಸಿನಿ ಏನೂ ಅಲ್ಲ ಎಂದು ಹೇಳಿದ್ದಾರೆ.