ಮಡಿಕೇರಿ, ಜ. 03 (DaijiworldNews/AK): ‘ಕೊರಗಜ್ಜ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ ನೀಡಿದೆ. ಚೆನ್ನಾಗಿ ರೀಲ್ಸ್ ಮಾಡಿ ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆಯಂತೆ. ಅದರೆ ಇದಕ್ಕೆ ಕೊಡಗಿನ ದೈವ ನರ್ತಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಚಿತ್ರತಂಡ ನೀಡಿದೆ.
ʻಕಾಂತಾರʼ ಸಿನಿಮಾದಲ್ಲಿ ದೈವ ವಿಡಂಬನೆ ಕುರಿತು ಸಾಕಷ್ಟು ಜನ ದೈವದ ವೇಷಭೂಷಣ ಹಾಕಿಕೊಂಡು ಸಿಕ್ಕಸಿಕ್ಕಲ್ಲಿ ರೀಲ್ಸ್ ಮಾಡುತ್ತಾ ದೈವಗಳಿಗೆ ಅಪಮಾನ ಮಾಡಿದ್ದರು. ಇದೀಗ ತುಳುನಾಡಿನ ಆರಾಧ್ಯ ದೈವವಾಗಿರುವ ಕೊರಗಜ್ಜನ ಕುರಿತು ರೀಲ್ಸ್ ಮಾಡಿ ಹೆಚ್ಚು ಲೈಕ್ಸ್, ವೀವ್ಸ್ ಗಳಿಸಿದವಿಗೆ ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿರುವುದು ಖಂಡನೀಯವಾಗಿದೆ. ಈ ತಪ್ಪು ಮುಂದುವರಿದರೆ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗುವುದಾಗಿ ಹೇಳಿದ್ದಾರೆ.