ಮುಂಬೈ, ಮಾ. 02 (DaijiworldNews/AA): 'ಕಾಂತಾರ: ಚಾಪ್ಟರ್ 1' ಸಿನಿಮಾದ ಬಗ್ಗೆ ಮಾತನಾಡುವಾಗ ತುಳುನಾಡಿನ ದೈವಕ್ಕೆ ಅವಮಾನ ಮಾಡಿ, ವಿವಾದ ಸೃಷ್ಟಿಸಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ನಟ ರಣವೀರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾ.9ಕ್ಕೆ ಮುಂದೂಡಿದೆ.

ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಲ್ಲಿ ಇಂದು ಈ ಅರ್ಜಿ ವಿಚಾರಣೆ ನಡೆಯಿತು. ಯುದ್ಧದಿಂದಾಗಿ ರಣವೀರ್ ಸಿಂಗ್ ಪರ ವಕೀಲರು ಇಂಗ್ಲೆಂಡ್ನಲ್ಲೇ ಉಳಿದಿದ್ದಾರೆ. ಹೀಗಾಗಿ ಈ ವಿಚಾರವನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ರಣವೀರ್ ಸಿಂಗ್ ಪರ ವಕೀಲ ಸಜನ್ ಪೂವಯ್ಯ ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಎಸ್ಪಿಪಿ ಜಗದೀಶ್ ಅವರು ರಣವೀರ್ ಸಿಂಗ್ಗೆ ನೋಟಿಸ್ ನೀಡಿದ್ದು, ಅವರು ಸಮಯ ಕೇಳಿದ್ದಾರೆ ಎಂದು ಮಾಹಿತಿ ನೀಡಿದರು. ಈ ವೇಳೆ ಪೊಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶ ವಿಸ್ತರಣೆ ಮಾಡಿದ್ದು, ಜೊತೆಗೆ ಮಾ.9ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.