ಟೋಕಿಯೊ, ಮೇ. 26 (DaijiworldNews/TA): ಜಪಾನ್ಗೆ ತೆರಳಿದ್ದ ಸರ್ವಪಕ್ಷ ನಿಯೋಗದ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕ ಏಕತೆಗೆ ಕರೆ ನೀಡಿದ್ದಾರೆ.

ಭಯೋತ್ಪಾದನೆ "ಹುಚ್ಚು ನಾಯಿ"ಯಾಗಿದ್ದರೆ, ಪಾಕಿಸ್ತಾನ ಅದರ "ನೀಚ ನಿಗ್ರಹಕಾರ" ಮತ್ತು ಅದನ್ನು ನಿಭಾಯಿಸಲು ಜಗತ್ತು ಒಂದಾಗಬೇಕು ಎಂದು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಶನಿವಾರ ಹೇಳಿದರು. ಜಪಾನ್ಗೆ ಭೇಟಿ ನೀಡಿರುವ ಭಾರತದ ನಿಯೋಗದ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದೇ ವೇಳೆ ಭಾರತವು ಯಾರ ಭಯಕ್ಕೂ ಮಣಿಯುವುದಿಲ್ಲ. ಭಯೋತ್ಪಾದನೆಗೆ ತಲೆಬಾಗುವುದಿಲ್ಲ ಎಂದು ಹೇಳಿದರು. ಇದಕ್ಕಾಗಿ ಭಯೋತ್ಪಾದನೆಯನ್ನು ಎದುರಿಸಲು ಜಗತ್ತು ಒಟ್ಟಾಗಿ ಸೇರುವ ಅಗತ್ಯವಿದೆ ಎಂಬುವುದಾಗಿ ಕರೆನೀಡಿದ್ದಾರೆ. ಭಯೋತ್ಪಾದನೆಯನ್ನು ಪ್ರಾಯೋಜಿಸುವಲ್ಲಿ ಪಾಕಿಸ್ತಾನದ ಪಾತ್ರದ ಪುರಾವೆಗಳೊಂದಿಗೆ ತಾವು ಮತ್ತು ಸರ್ವಪಕ್ಷ ನಿಯೋಗವು ವಿವಿಧ ದೇಶಗಳಿಗೆ ಪ್ರಯಾಣಿಸುತ್ತಿದ್ದೇವೆ ಎಂದು ಬ್ಯಾನರ್ಜಿ ಹೇಳಿದ್ದಾರೆ. ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಇರುವುದಾಗಿ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಭಾರತ ಜವಾಬ್ದಾರಿಯುತವಾಗಿ ನಿಭಾಯಿಸಿದೆ ಮತ್ತು ಅವರ ಕ್ರಮಗಳು ನಿಖರವಾಗಿ ಮತ್ತು ಉಲ್ಬಣಗೊಳ್ಳದಂತೆ ನೋಡಿಕೊಳ್ಳಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ನ್ನು ಪ್ರಾರಂಭಿಸಿತ್ತು.
ಭಾರತವು ಜಪಾನ್ನ ಕಾರ್ಯತಂತ್ರದ ಪಾಲುದಾರನಾಗಿರುವುದರಿಂದ ಮತ್ತು ಭಯೋತ್ಪಾದನೆಯನ್ನು ಬೆಳೆಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯ ಬಗ್ಗೆ ರಾಷ್ಟ್ರಕ್ಕೆ ಎಚ್ಚರಿಕೆ ನೀಡಲು ಭಾರತ ಜಪಾನನ್ನು ಸಂಪರ್ಕಿಸಿದೆ ಎಂದು ಟಿಎಂಸಿ ಸಂಸದರು ಹೇಳಿದ್ದಾರೆ.
ಟಿಎಂಸಿ ಸಂಸದರು ಜನತಾ ದಳ (ಯುನೈಟೆಡ್) ಸಂಸದ ಸಂಜಯ್ ಝಾ ನೇತೃತ್ವದ ನಿಯೋಗದ ಭಾಗವಾಗಿದ್ದಾರೆ, ಇದರಲ್ಲಿ ರಾಯಭಾರಿ ಮೋಹನ್ ಕುಮಾರ್, ಬಿಜೆಪಿ ಸಂಸದ ಡಾ. ಹೇಮಾಂಗ್ ಜೋಶಿ, ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್, ಬಿಜೆಪಿ ಸಂಸದ ಅಪರಾಜಿತಾ ಸಾರಂಗಿ, ಬಿಜೆಪಿ ಸಂಸದ ಬ್ರಿಜ್ ಲಾಲ್ ಮತ್ತು ಬಿಜೆಪಿ ಸಂಸದ ಪ್ರದಾನ್ ಬರೂಹ್ ಇದ್ದಾರೆ.