ಕಾಸರಗೋಡು, ಮೇ.20 (DaijiworldNews/TA): ಸೈಕಲ್ ಚೈನ್ ಕಾಲಿಗೆ ಸಿಲುಕಿ ಆರು ವರ್ಷದ ಬಾಲಕ ನರಳಾಡಿದ ಘಟನೆ ಜಿಲ್ಲೆಯ ತಳಂಗರೆಯಲ್ಲಿ ನಡೆದಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬಾಲಕನನ್ನು ರಕ್ಷಿಸಿದ್ದಾರೆ.

ಸೋಮವಾರ ಸಂಜೆ ಸೈಕಲ್ನಲ್ಲಿ ತೆರಳುತ್ತಿದ್ದ ಬಾಲಕನ ಕಾಲಿಗೆ ಚೈನ್ ಸಿಲುಕಿಕೊಂಡಿದೆ. ಬಾಲಕನ ಬೊಬ್ಬೆ ಕೇಳಿ ಮನೆಯವರು ಹಾಗೂ ಸ್ಥಳೀಯರು ದಾವಿಸಿ ಬಂದು ತೆಗೆಯಲೆತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಕಾಸರಗೋಡಿನ ಅಗ್ನಿ ಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಲಾಯಿತು .
ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಟ್ಟರ್ ಬಳಸಿ ಚೈನ್ ತುಂಡರಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಬಾಲಕನ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಅಧಿಕಾರಿ ವಿ. ಎನ್ ಗೋಪಾಲನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.