ಬಂಟ್ವಾಳ, ಮೇ. 21 (DaijiworldNews/AA): ಮದ್ಯ ಸೇವಿಸಿ ಆಲ್ಟೋ ಕಾರಿನಲ್ಲಿ ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 20ರಂದು ನಡೆದಿದೆ.

ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಅವರಿಗೆ ಗಂಭೀರ ಗಾಯಗಳಾಗಿವೆ.
ಸ್ಥಳಕ್ಕೆ 12 ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಮತ್ತು ಮದ್ಯದ ನಶೆಯಲ್ಲಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ಈ ಯುವಕರನ್ನು ಹೊರರಾಜ್ಯದವರು ಎನ್ನಲಾಗಿದೆ.