ಕುಂದಾಪುರ, ಜೂ. 08 (DaijiworldNews/AA): ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗುತ್ತಿದ್ದ ಬೆಂಗಳೂರಿನ ನಾಲ್ವರು ಸೇರಿದಂತೆ ಗೋವಾದ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರನ್ನು ರಕ್ಷಿಸಿದ ಘಟನೆ ಜನಪ್ರಿಯ ತ್ರಾಸಿ-ಮರವಂತೆ ಬೀಚ್ ನಲ್ಲಿ ಜೂನ್ 7ರ ಸಂಜೆ ಸಂಭವಿಸಿದೆ.

ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ, ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, 24x7 ಆಂಬ್ಯುಲೆನ್ಸ್ ಸಿಬ್ಬಂದಿ ಇಬ್ರಾಹಿಂ ಗಂಗೊಳ್ಳಿ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಘಟನೆ ಬಳಿಕ ಗಂಗೊಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ, ಒನ್-ಟು ಸಿಬ್ಬಂದಿ ಮತ್ತು ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಪ್ರವಾಸಿಗರ ಸುರಕ್ಷತೆಗಾಗಿ ಎಚ್ಚರಿಕೆ ನೀಡಲು ಮತ್ತು ಮುನ್ನೆಚ್ಚರಿಕೆ ವಹಿಸಲು ಸೈರನ್ ಮೊಳಗಿಸಲಾಯಿತು.