ಬಂಟ್ವಾಳ, ಜೂ. 22 (DaijiworldNews/AA): ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ದರೆಗೆ ಗುದ್ದಿ ನಿಂತ ಘಟನೆ ಅಡ್ಯನಡ್ಕ ಸಮೀಪ ಜೂನ್ 22 ರಂದು ನಡೆದಿದೆ.

ಈ ಘಟನೆಯಲ್ಲಿ ಪಾದಚಾರಿ ಮತ್ತು ಕಾರು ಚಾಲಕ ಇಬ್ಬರಿಗೂ ಗಾಯಗಳಾಗಿವೆ.
ಗಾಯಾಳುಗಳನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಾಣಿಯಾಣಿ ಅವರು ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.