ಬೆಳ್ತಂಗಡಿ, ಜೂ. 23 (DaijiworldNews/AA): ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ, ಸಹಪ್ರಯಾಣಿಕ ಗಾಯಗೊಂಡ ಘಟನೆ ಭಾನುವಾರ ಬಾದ್ಯಾರ್ ಬಳಿ ನಡೆದಿದೆ.

ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಮೃತ ಚಾಲಕ ಎಂದು ಗುರುತಿಸಲಾಗಿದೆ.
ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಆಟೋ ರಿಕ್ಷಾ ಸಂಚರಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಾನಂದ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆ ಮೃತಪಟ್ಟಿದ್ದರು.
ಆಟೋದಲ್ಲಿದ್ದ ಸಹಪ್ರಯಾಣಿಕ ಶಿವರಾಜ್ ಕೂಡ ಗಾಯಗೊಂಡಿದ್ದು, ಸದ್ಯ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.