ಬೆಳ್ತಂಗಡಿ, ,ಜು. 04 (DaijiworldNews/AK): ಧರ್ಮಸ್ಥಳ ಗ್ರಾಮದಲ್ಲಿ ಹಿಂದೆ ನಡೆದಿರುವ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದು ಆಘಾತಕಾರಿ ಸಂಗತಿಯಾಗಿದೆ.

ಜುಲೈ 3 ರಂದು ಸಲ್ಲಿಸಿದ ದೂರಿನ ಪ್ರಕಾರ, ಈ ಪ್ರದೇಶದಲ್ಲಿ ಹಲವಾರು ಅಪರಾಧಗಳು ನಡೆದಿವೆ ಮತ್ತು ಹಲವಾರು ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡುವಂತೆ ಬೆದರಿಕೆ ಹಾಕಲಾಗಿದೆ ಎಂದು ದೂರುದಾರರು ಹೇಳಿಕೊಂಡಿದ್ದಾರೆ.
ದೂರುದಾರರು ಈ ಹಿಂದೆಯೂ ಇಂತಹ ಹಲವಾರು ಶವಗಳನ್ನು ಒತ್ತಡದಲ್ಲಿ ವಿಲೇವಾರಿ ಮಾಡಿದ್ದೇವೆ ಮತ್ತು ಈಗ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ದ ಎಂದು ಹೇಳಿದ್ದಾರೆ.
ದೂರಿನ ಆಧಾರದ ಮೇಲೆ ಮತ್ತು ಗೌರವಾನ್ವಿತ ನ್ಯಾಯಾಲಯದಿಂದ ಅಗತ್ಯ ಅನುಮತಿಗಳನ್ನು ಪಡೆದ ನಂತರ, ಜುಲೈ 4 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಪರಾಧ ಸಂಖ್ಯೆ 39/2025, ಸೆಕ್ಷನ್ 211(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ.
ದೂರುದಾರರು ತಮ್ಮ ಗುರುತನ್ನು ಗೌಪ್ಯವಾಗಿಡಬೇಕೆಂದು ನಿರ್ದಿಷ್ಟವಾಗಿ ವಿನಂತಿಸಿದ್ದಾರೆ. ಅದರಂತೆ, ದೂರುದಾರರ ಯಾವುದೇ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.