ಮಂಗಳೂರು,ಜು. 04 (DaijiworldNews/AK): ಕೇರಳದ ಕೊಟ್ಟಾಯಂ ಮೂಲದ ವಿದ್ಯಾರ್ಥಿ ಹನೀಫ್ ಎಂಬಾತ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಮಂಗಳೂರಿನ ಕಾಲೇಜೊಂದರಲ್ಲಿ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಈತ ಕೋಡಿಯಾಲ್ಬೈಲ್ ಬಳಿ ಪೇಯಿಂಗ್ ಗೆಸ್ಟ್ ಆಗಿದ್ದ. ಜುಲೈ 3 ರ ರಾತ್ರಿ ಊಟ ಮಾಡಲೆಂದು ಇತರರು ಕರೆದಾಗ ರೂಮಿನ ಒಳಗಿನಿಂದ ಯಾವುದೇ ಸ್ಪಂದನೆ ಇರಲಿಲ್ಲ ಎನ್ನಲಾಗಿದೆ.
ಬಳಿಕ ಪರಿಶೀಲಿಸಿದಾಗ ಕಿಟಕಿಗೆ ನೈಲಾನ್ ಹಗ್ಗ ಹಾಕಿ ಕುತ್ತಿಗೆಗೆ ಬಿಗಿದಿರುವುದು ಬೆಳಕಿಗೆ ಬಂದಿದೆ. ಈತನ ಕೈಯಲ್ಲಿ ಬ್ಲೇಡ್ನಿಂದ ಗೀರಿದ ಗಾಯಗಳು ಕಂಡು ಬಂದಿದೆ. ಈತ ಈ ಹಿಂದೆಯೂ ಬ್ಲೇಡ್ನಿಂದ ಗೀರಿ ಗಾಯಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತದೆ.