ಮಂಗಳೂರು, ಜು. 31 (DaijiworldNews/AK): ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ.
ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ನ ಸವಾರ ನೌಷದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ತಾನು ಸುನೀಲ್ ಡಿ’ಸೋಜಾನೊಂದಿಗೆ ಸೇರಿ ಆಡಂಕುದ್ರುವಿನಲ್ಲಿ ನೇತ್ರಾವತಿ ನದಿಯ ತೀರದಿಂದ ಮರಳು ತುಂಬಿಸಿಕೊಂಡು ಹೋಗುತ್ತಿದ್ದು ಪಿಕಪ್ ವಾಹನಕ್ಕೆ ಸ್ಕೂಟರ್ನ್ನು ಬೆಂಗವಲಾಗಿ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ.
ಆರೋಪಿಗಳು ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಮರಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಖಚಿತವಾಗಿದೆ. ಪಿಕಪ್ ವಾಹನ, ಸುಮಾರು 40 ಬುಟ್ಟಿ ಮರಳು ಮತ್ತು ಸ್ಕೂಟರ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.