ಉಡುಪಿ, ಅ. 09(DaijiworldNews/ TA): ಕೋಟದ ನಂಚಾರು ಗ್ರಾಮದ ಚೀನಿಬೆಟ್ಟು ಚೌಂಡಾಲ ಸೀತಾನದಿ ಹೊಳೆಯಲ್ಲಿ ಅ.8ರಂದು ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ದಾಳಿ ನಡೆಸಿದ ಕೋಟ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಪಿಕ್ಅಪ್ ವಾಹನ ಹಾಗೂ ಸುಮಾರು 5,000ರೂ. ಮೌಲ್ಯದ ಮರಳನ್ನು ಸ್ವಾದೀನಪಡಿಸಿ ಕೊಳ್ಳಲಾಗಿದೆ. ಈ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಗಣೇಶ್ ಶೆಟ್ಟಿ ನಂಚಾರು ಹಾಗೂ ಚೇತನ ನಾಯ್ಕ ಎಂಬವರು ಓಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.