ಮಂಗಳೂರು, ,ನ. 14 (DaijiworldNews/AK): ನಗರದ ನಂತೂರು ಬಳಿ ಕಾರೊಂದು ಬೆಂಕಿಗಾಹುತಿ ಘಟನೆ ಸಂಭವಿಸಿದೆ. ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಕಾರಿನ ಬೆಂಕಿ ನಂದಿಸಲು ಪ್ರಯತ್ನಿಸಿದರು.


ಬಳಿಕ ಪಾಲಿಕೆ ನೀರು ಸರಬರಾಜು ಟ್ಯಾಂಕರ್ ಸ್ಥಳಕ್ಕೆ ಆಗಮಿಸಿದ್ದು. ಟ್ಯಾಂಕರ್ ಸಿಬ್ಬಂದಿ ನೀರು ಹಾಯಿಸುವ ಮೂಲಕ ಕಾರಿನಲ್ಲಿ ಉಂಟಾದ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಘಟನೆಗೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಸ್ಥಳದಲ್ಲಿ ಸಂಚಾರಿ ಪೊಲೀಸರು ಉಪಸ್ಥಿತರಿದ್ದಾರೆ.