ಕಾರ್ಕಳ,ನ. 24 (DaijiworldNews/AK): ಬಾವಿಗೆ ಅಡ್ಡವಾಗಿ ಅಳವಡಿಸಲಾಗಿದ್ದ ಕಂಬ ಮುರಿದುಬಿದ್ದ ಪರಿಣಾಮವಾಗಿ ನೀರುಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಮಠದಕೆರೆ ಎದುರುಭಾಗದ ಕೆಂಚಬೆಟ್ಟು ಎಂಬಲ್ಲಿ ಸಂಭವಿಸಿದೆ.


ಪ್ರಶಾಂತ್ ಭಂಡಾರಿ (40) ಘಟನೆಯಲ್ಲಿ ಜೀವಾಪಾಯದಿಂದ ಪಾರಾದವರು. ನ.24ರ೦ದು ಮನೆ ಸಮೀಪದ ಈ ಘಟನೆ ಸಂಭವಿಸಿದ್ದು, ಮನೆ ಮಂದಿ ನೀಡಿದ ಮಾಹಿತಿಯನ್ವಯ ಅಗ್ನಿಶಾಮಕ ದಳದ ಸಿಬ್ಬಂದಿಯರು ಕಾರ್ಯಚರಣೆ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿಗಳಾದ ಅಚ್ಚುತ ಕರ್ಕೇರ, ಹರಿಪ್ರಸಾದ್ ಶೆಟ್ಟಿಗಾರ್, ಮುಝಾಮಿಲ್, ದಿನೇಶ್ ಮತ್ತು ಗಣೇಶ್ ಪಾಲ್ಗೊಂಡಿದ್ದರು.