ಉಡುಪಿ,ನ. 25 (DaijiworldNews/TA): ಗಂಗೊಳ್ಳಿಯ ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀಲ ಶೆಟ್ಟಿ ಹಾಗೂ ಇತರರು ಪೊಲೀಸ್ ದಾಳಿ ವೇಳೆ ಸ್ಥಳದಿಂದ ಓಡಿ ಹೋಗಿದ್ದಾರೆ. 7 ಹುಂಜ, 5 ಕೋಳಿಬಾಳು ಹಾಗೂ 2400ರೂ. ನಗದು, ಏಳು ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.