ಮಂಗಳೂರು, ಡಿ. 02 (DaijiworldNews/AA): ಮೂಡುಶೆಡ್ಡೆ ಗ್ರಾಮ ಪಂಚಾಯತ್ ಕಚೇರಿಯ ಎದುರು ಮಗಳೇ ತನ್ನ ತಾಯಿಗೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಹಿಳಾ ರಕ್ಷಣಾ ವೇದಿಕೆ ಮಧ್ಯ ಪ್ರವೇಶಿಸಿ ಮಗಳು ನೇತ್ರಾವತಿ ವಿರುದ್ಧ ದೂರು ದಾಖಲಿಸಿದೆ.

ಹಿರಿಯ ನಾಗರಿಕರಾದ ನಿರ್ಮಲಾ ಅವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ದೂರನ್ನು ದಾಖಲಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕಿ ರಮಿತಾ ಸೂರ್ಯವಂಶಿ ಹಾಗೂ ಹಿಂದೂ ಜಾಗರಣ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದೀಕ್ಷಿತ್ ಉಪಸ್ಥಿತರಿದ್ದರು.
ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.