ಕಾಪು, ಡಿ. 07 (DaijiworldNews/AA): ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನ ವಿದ್ಯಾನಿಕೇತನ್ ಶಾಲೆ ಎದುರು ಡಿಸೆಂಬರ್ 7ರಂದು ಬೆಳಿಗ್ಗೆ ನಡೆದಿದೆ.

ಗಾಯಗೊಂಡಿರುವ ಚಾಲಕನನ್ನು ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
ಕಾಪುವಿನಿಂದ ಉಚ್ಚಿಲ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಗಂಭೀರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್ಡಿಪಿಐ ಆ್ಯಂಬುಲೆನ್ಸ್ ಸಿಬ್ಬಂದಿಗಳಾದ ಜಲಾಲುದ್ದೀನ್ ಉಚ್ಚಿಲ ಮತ್ತು ಹಮೀದ್ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.