ಸುಳ್ಯ, ಡಿ. 08 (DaijiworldNews/TA): ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ, ತತ್ವಮಸಿ ಗ್ರೂಪ್ ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಕುಂಟಾರು ರವೀಶ ತಂತ್ರಿಗಳು ಆಶೀರ್ವಚನ ನೀಡಿ "ಭಕ್ತಿ ಮಾರ್ಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆಯಿಂದ ಸಾಧ್ಯ. ಭಜನೆ ಸಮಾಜದ ಅವಿಭಾಜ್ಯ ಅಂಗವಾಗಿ ಮಾಡುವಲ್ಲಿ ಧರ್ಮಸ್ಥಳ ಯೋಜನೆ ಭಜನಾ ಕಮ್ಮಟ ದೊಡ್ಡ ಕೆಲಸ ಮಾಡಿದೆ. ನಮ್ಮ ಎಲ್ಲರ ಮನೆಗಳಲ್ಲಿ, ಧಾರ್ಮಿಕ ಕ್ಷೇತ್ರಗಳಲ್ಲಿ ಭಜನೆ ನಿರಂತರವಾಗಿ ಇದೇ ರೀತಿ ನಡೆಯುತ್ತಿರಲೆಂದು ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಾಸ ಸಂಕೀರ್ತನೆಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘಟಕರು ಉಪಸ್ಥಿತರಿದ್ದರು. ನಂತರ ಕುಣಿತ ಭಜನಾ ಭಜನೆ ಸ್ಪರ್ಧೆ ನಡೆಯಿತು.