ಸುಳ್ಯ, ಫೆ. 06 (DaijiworldNews/TA): ಪಂಜ ಸೀಮೆ ದೇವಾಲಯವಾದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.5 ರಂದು ಶ್ರೀ ದೇವರ ದರ್ಶನ ಬಲಿ ವೈಭವದಿಂದ ನಡೆಯಿತು.

ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ. ನಡೆಯಿತು. ಶ್ರೀ ದೇವರ ಬಲಿಯೊಂದಿಗೆ ವೇದ ಮಂತ್ರ ಘೋಷ ಸ್ಯಾಕ್ಸೋಪನ್ , ಚೆಂಡೆ, ಬ್ಯಾಂಡ್ ವಾಲಗ ಬೇತಾಳಗಳು,ಗೊಂಬೆಗಳು, ಪಾರ್ಚೋಡ್ ಪ್ರಖ್ಯಾತ್ ರೈ ಅವರ ಗೂಳಿ ಪಾಲ್ಗೊಂಡಿತ್ತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷರಾದ ಡಾ.ರಾಮಯ್ಯ ಭಟ್, ಪದ್ಮನಾಭ ರೈ ಅಗೋಳಿಬೈಲು ಗುತ್ತು ಸೇರಿದಂತೆ ಸಾವಿರಾರು ಭಕ್ತಾದಿಗಳು, ಅರ್ಚಕರು, ದೇವಳ ಸಿಬ್ಬಂದಿ ಉಪಸ್ಥಿತರಿದ್ದರು.