ಸುಳ್ಯ,ಫೆ. 10 (DaijiworldNews/AK):ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಬೂತ್ ಮಟ್ಟದ ಕಾರ್ಯಕರ್ತರ ಕ್ರೀಡಾಕೂಟ ಕಮಲ ಸಂಭ್ರಮವು ಫೆ. 8 ರಂದು ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಲಳಂಬೆ ಯವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಆಲೆಟ್ಟಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ರವರು ಅಧ್ಯಕ್ಷತೆ ವಹಿಸಿದ್ದರು. ಪುರುಷೋತ್ತಮ ಗೌಡ ಕೊಲ್ಟಾರು ರವರು ತೆಂಗಿನ ಕಾಯಿ ಒಡೆದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಕೃಷ್ಣ ಎಂ. ಆರ್, ಮಂಡಲ ಕಾರ್ಯದರ್ಶಿ ಶಿವಾನಂದ ಸುಬ್ರಹ್ಮಣ್ಯ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನ ಕಟ್ಟೆ,ರೋಟರಿ ಶಾಲೆಯ ಸಂಚಾಲಕರೊ. ಪ್ರಭಾಕರನ್ ನಾಯರ್, ಪಕ್ಷದ ಪ್ರಮುಖರಾದ ಸುಭೋದ್ ಶೆಟ್ಟಿ ಮೇನಾಲ, ಕರುಣಾಕರ ಹಾಸ್ಪಾರೆ ಉಪಸ್ಥಿತರಿದ್ದರು.