ಉಡುಪಿ, ಫೆ. 15 (DaijiworldNews/TA): ಈ ಬಾರಿ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಜನರ ತೆರಿಗೆ ಹಣ ಹಾಳು ಮಾಡುವ ಕೆಲಸವಾಗಿದೆ. ಅಲ್ಲದೆ ಇದೊಂದು ಕೇಂದ್ರ ಸರ್ಕಾರ ಮತ್ತು ಮೋದಿ ಅವರನ್ನು ಟೀಕೆ ಮಾಡಲು ಕರೆದ ಅಧಿವೇಶನವಾಗಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಜಿ ರಾಮ್ ಜಿ ಬಗ್ಗೆ ಸರಿಯಾದ ಚರ್ಚೆ ಆಗಲಿಲ್ಲ. ಅಲ್ಲದೆ ಅಬಕಾರಿ ಇಲಾಖೆ ಭ್ರಷ್ಟಾಚಾರ ಆರೋಪದ ಬಗ್ಗೆ ತಾರ್ಕಿಕ ಅಂತ್ಯವಾಗಿಲ್ಲ. ಕೇಂದ್ರ ಸರ್ಕಾರದ ಪ್ರತಿನಿಧಿಯಾದ ರಾಜ್ಯಪಾಲರಿಂದ ಕೇಂದ್ರವನ್ನೇ ಟೀಕೆ ಮಾಡಿಸುವುದು ಎಷ್ಟು ಸರಿ? ಇದರಿಂದ ರಾಜ್ಯ ಮತ್ತು ಕೇಂದ್ರದ ನಡುವಿನ ಸಂಬಂಧ ಹಾಳಾಗುತ್ತದೆ. ಶಾಸಕರ ಸಂಬಳ ಭತ್ಯೆಗಾಗಿ ಅಧಿವೇಶನ ನಡೆದಿದೆ ಎಂದು ಅವರು ತಿಳಿಸಿದ್ದಾರೆ.