ಉಡುಪಿ, ಆ. 11 (DaijiworldNews/AK):ಉಡುಪಿಯ ಕೆಲಪರ್ಕಳದಲ್ಲಿ ಸೋಮವಾರ ರಾತ್ರಿ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕ ಸಾವನ್ನಪ್ಪಿದ್ದಾನೆ.

ಮೃತನನ್ನು ಸನತ್ ಎಂದು ಗುರುತಿಸಲಾಗಿದೆ. ದೂರಿನ ಪ್ರಕಾರ ಸನತ್ ತನ್ನ ಗೆಳೆಯರೊಂದಿಗೆ ಮಣಿಪಾಲದಲ್ಲಿ ರಾತ್ರಿ ಊಟ ಮುಗಿಸಿ, ಗೆಳೆಯ ಆಶಿಶ್ ಎಂಬವರ ಬುಲೆಟ್ ಬೈಕ್ ನಲ್ಲಿ ಮನೆಗೆ ಹೋದರು. ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ಹೋಗುತ್ತಿದ್ದ ಬುಲೆಟ್, ಅತೀವೇಗ ಹಾಗೂ ಅಜಾಗರೂಕತೆಯಿಂದ ಸವಾರನ ನಿಯಂತ್ರಣ ತಪ್ಪಿ, ಇಳಿಜಾರಿನಲ್ಲಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದರ ಪರಿಣಾಮ ಬುಲೆಟ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟ ಸನತ್, ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಪರಿಣಾಮ ಸನತ್ ಮತ್ತು ಅವನ ಮೋಟಾರ್ ಸೈಕಲ್ ರಸ್ತೆ ಬದಿಯ ಚರಂಡಿಗೆ ಬಿದ್ದವು. ಅವನ ಸ್ನೇಹಿತರು ಮತ್ತು ಸಾರ್ವಜನಿಕರು ಅವನ ಸಹಾಯಕ್ಕೆ ಧಾವಿಸಿ ವಾಹನದಲ್ಲಿ ಮಣಿಪಾಲದ ಆಸ್ಪತ್ರೆಗೆ ಸಾಗಿಸಿದರು. ಆದರೆ, ವೈದ್ಯರು ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.