ಬಂಟ್ವಾಳ, ಫೆ. 09 (DaijiworldNews/HR): ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
![](https://daijiworld.ap-south-1.linodeobjects.com/iWeb/tvdaijiworld/img_tv247/hr-090221-niraj1.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/hr-090221-niraj2.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/hr-090221-niraj3.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/hr-090221-niraj4.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/hr-090221-niraj5.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/hr-090221-niraj6.jpg)
ಅನಂತಾಡಿ ಪಂತಡ್ಕ ನಿವಾಸಿ ನೀರಜ್(30) ಆತ್ಮಹತ್ಯೆ ಮಾಡಿಕೊಂಡ ಯುವಕ.
ಯುವಕನ ತಾಯಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಪಾಣೆಮಂಗಳೂರು ಸೇತುವೆಯಿಂದ ಯುವಕ ರಾತ್ರಿ ನದಿಗೆ ಹಾರಿದ್ದು, ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಹುಡುಕಾಡಿದರೂ, ಯುವಕನ ಸುಳಿವು ಪತ್ತೆಯಾಗಿರಲಿಲ್ಲ.
ಸ್ಥಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿಶಾಮಕ ದಳದ ತಂಡ ಹುಡುಕಾಟ ನಡೆಸಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.