ಪುತ್ತೂರು, ಮೇ 23 (DaijiworldNews/MS): ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://daijiworld.ap-south-1.linodeobjects.com/Linode/img_tv247/ms-230524-mathandoor.jpg)
ಮೇ 17ರಂದು ವಾಟ್ಸ್ ಆ್ಯಪ್ ನಲ್ಲಿ ಪ್ರಜ್ವಲ್ ರೈ ಎಂಬಾತ ಕೀಳು ಮಟ್ಟದ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದು, ಸಾಮಾಜಿಕ ಜಾಲತಾಣದ ಮುಖಾಂತರ ರೋಡಿನಲ್ಲಿ 'ಕಲ್ಲೇಟು ಬೀಳುವುದು ಖಚಿತ' ಎಂಬುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಆತನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಜೀವ ಮಠಂದೂರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.