ಬೆಂಗಳೂರು, ಜೂ.02 (DaijiworldNews/AK):ತಾಂತ್ರಿಕ ಸಮಿತಿ ವರದಿ ಆಧರಿಸಿ ಹೇಮಾವತಿ ಕೆನಾಲ್ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ್ದೇವೆ. ಈಗ ಬಿಜೆಪಿ ಶಾಸಕರು ಗಲಾಟೆ ಮಾಡಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು. ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.