ಲಖನೌ, ಜೂ. 02 (DaijiworldNews/AA): ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮವೂ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ಅವರು ಸೇರ್ಪಡೆಗೊಂಡಿದ್ದಾರೆ.

ದ್ವೇಷ ಭಾಷಣ ಪ್ರಕರಣದಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾದ ಹಿನ್ನೆಲೆ ಭೂಗತ ಪಾತಕಿ, ರಾಜಕಾರಣಿ ಮುಖಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
2022ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಬ್ಬಾಸ್ ಅನ್ಸಾರಿ ಅವರು ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದರು. ಆದರೆ ಇದೀಗ ಅವರು ಅನರ್ಹಗೊಂಡ ಶಾಸಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಇನ್ನು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕರಾದ ಆಜಂ ಖಾನ್, ಅಬ್ದುಲ್ಲಾ ಆಜಂ ಖಾನ್, ಹಾಜಿ ಇರ್ಫಾನ್ ಸೋಲಂಕಿ, ವಿಕ್ರಮ್ ಸಿಂಗ್ ಹಾಗೂ ಬಿಜೆಪಿಯ ರಾಮ್ದುಲಾರ್ ಅವರನ್ನು 18ನೇ ವಿಧಾನಸಭೆಯಲ್ಲಿ ಅನರ್ಹಗೊಳಿಸಲಾಗಿದೆ.