ತಿರುವನಂತಪುರಂ,ಜೂ. 09 (DaijiworldNews/AK): ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್ಗಳು ಸಮುದ್ರಕ್ಕೆ ಬಿದ್ದಿದೆ.

12.5 ಮೀಟರ್ ಡ್ರಾಫ್ಟ್ ಹೊಂದಿರುವ 270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. 22 ಸಿಬ್ಬಂದಿಗಳಲ್ಲಿ 18 ಜನರನ್ನು ಭಾರತೀಯ ನೌಕಾಪಡೆಯ ನೌಕೆ INS ಸೂರತ್ ರಕ್ಷಿಸಿದೆ, ಆದರೆ 4 ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಐದು ಸಿಬ್ಬಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 8 – ಚೀನಾ, 4 – ತೈವಾನ್, 4 – ಮ್ಯಾನ್ಮಾರ್, 2 – ಇಂಡೋನೇಷ್ಯಾ ಸಿಬ್ಬಂದಿ ಸದಸ್ಯರ
ರಕ್ಷಿಸಲ್ಪಟ್ಟ ಮತ್ತು ಗಾಯಗೊಂಡ ಸಿಬ್ಬಂದಿಯನ್ನು ಹೊತ್ತ INS ಸೂರತ್ ಇಂದು ರಾತ್ರಿ 2200 ಗಂಟೆಗಳ ವೇಳೆಗೆ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರ (NMPA)ಕ್ಕೆ ಆಗಮಿಸುವ ನಿರೀಕ್ಷೆಯಿದೆ. ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡಲು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
ರಕ್ಷಿಸಲಾದ ಸಿಬ್ಬಂದಿ ನಾಲ್ಕು ದೇಶಗಳ ಪ್ರಜೆಗಳು
8 – ಚೀನಾ, 4 – ತೈವಾನ್, 4 – ಮ್ಯಾನ್ಮಾರ್, 2 – ಇಂಡೋನೇಷ್ಯಾ ಎನ್ನಲಾಗಿದೆ.
ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆಯ ಹಡಗುಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಹಡಗಿನಲ್ಲಿದ್ದವರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.