ತಿರುವನಂತಪುರಂ, ಜೂ. 14 (DaijiworldNews/AA): ಕೇರಳದ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಈ ಹಿನ್ನಲೆ ಕೇರಳದ ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಕೇರಳದ ಪಾಲಕ್ಕಾಡ್, ಎರ್ನಾಕುಲಂ, ತ್ರಿಶೂರ್, ಇಡುಕ್ಕಿ, ಕೊಟ್ಟಾಯಂ ಮತ್ತು ಪಥನಾಂತಿಟ್ಟ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ತಿರುವನಂತಪುರಂ, ಕೊಲ್ಲಂ ಮತ್ತು ಅಲಪ್ಪುಳದಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ ಎಂದು ಐಎಂಡಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ನೀಡಲಾಗಿದ್ದು, 11 ಸೆಂ.ಮೀ.ನಿಂದ 20 ಸೆಂ.ಮೀ.ವರೆಗಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕೇರಳದ ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್, ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಇಂದಿನಿAದ ಜೂನ್ 17ರವರೆಗೆ ಕೇರಳದ ಕೆಲವು ಸ್ಥಳಗಳಲ್ಲಿ ಭಾರೀ (24 ಗಂಟೆಗಳಲ್ಲಿ 20 ಸೆಂ.ಮೀ.) ಮಳೆಯಾಗುವ ಸಾಧ್ಯತೆ ಇದೆ. ಜೂನ್ 18ರಂದು ಕೇರಳದ ಕೆಲವು ಸ್ಥಳಗಳಲ್ಲಿ ಭಾರೀ (24 ಗಂಟೆಗಳಲ್ಲಿ 7-11 ಸೆಂ.ಮೀ.) ಮಳೆಯಾಗುವ ಸಾಧ್ಯತೆ ಇದೆ. ಜೂನ್ 15ರಂದು ಲಕ್ಷದ್ವೀಪದ ಕೆಲವು ಸ್ಥಳಗಳಲ್ಲಿ ಭಾರೀ (24 ಗಂಟೆಗಳಲ್ಲಿ 7-11 ಸೆಂ.ಮೀ.) ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಪ್ರಕಟಣೆ ಹೊರಡಿಸಿದೆ.